Monday, May 2, 2011

ಅಮೇರಿಕಾ ಹಾಗೂ ಭಾರತ

ನಿನ್ನೆ ಅಮೇರಿಕಾ ಒಂದು ದೊಡ್ಡದಾದ ನಿಟ್ಟುಸಿರು ಬಿಟ್ಟಿತು. ಅದೇ ಸಾಕಿ ಬೆಳೆಸಿದ ಒಸಾಮಾ ಮುಂದೊಂದು ದಿನ ತನಗೇ ತಿರುಗುಬಾಣವಾಗಿ ಬಹು ದೊಡ್ಡ ನಷ್ಟ ಮಾಡುತ್ತಾನೆ ಎಂದು ಕನಸಿನಲ್ಲಿಯೂ ಕೂಡ ಏಣಿಸಿರಲಿಲ್ಲ. ಅದರೂ ಆ ದೇಶ ತೋರಿದ ದಿಟ್ಟ ನಿರ್ಧಾರ ಎಲ್ಲರೂ ಮೆಚ್ಚುವಂತಹದ್ದು . ಹತ್ತು ವರ್ಷದಲ್ಲಿ ಅದು ಸರ್ವ ರೀತಿಯಿಂದಲೂ ತಯಾರಿ ಮಾಡಿ ಕೊನೆಗೂ ಅವನನ್ನು ಬಲಿ ತೆಗೆದುಕೊಂಡೆಬಿಡ್ತು.

ಒಸಾಮಾ ಅಮೇರಿಕಾ ದಾಳಿ ಮಾಡಿದ ಒಂದೇ ತಿಂಗಳಲ್ಲಿ ನಮ್ಮ ಪ್ರಜಾಪ್ರಭುತ್ವ ದ ಸಂಕೇತವಾಗಿರುವ ಸಂಸತ್ ಭವನದ ಮೇಲೆ ದಾಳಿ ನೆಡಿಯಿತು. ಅದೃಷ್ಟವಶಾತ್ ನಮ್ಮ ಧೀರ ರಕ್ಷಣಾ ಸಿಬ್ಬಂದಿಗಳು ತಮ್ಮ ಜೀವವನ್ನೇ ಪಣವಾಗಿಟ್ಟು ಹೆಚ್ಚಿನ ನಷ್ಟವಾಗುವುದನ್ನು ತಪ್ಪಿಸಿದರು. ಅದಾದ ಮೇಲೆ ಆ ದಾಳಿಯ ರೂವಾರಿ ಗಳನ್ನೂ ಬಂದಿಸಿದಾಗ ನಮ್ಮ ದೇಶವಾಸಿಗಳಿಗೆ ಏನೋ ಸಮಾದಾನ ದೊರಕಿತ್ತು. ಆದರೆ ನಮ್ಮ ಕೀಳು ಮಟ್ಟದ ರಾಜಕೀಯ ಎಲ್ಲಿಗೆ ಬಂದು ಮುಟ್ಟಿತೆಂದರೆ, ಅವನಿಗೆ ಕೊಟ್ಟ ಶಿಕ್ಷೆಯನ್ನೂ ಮುಂದೆ ಮುಂದೆ ಹಾಕುತ್ತಲೇ ಬಂದರು. ಇನ್ನೂ ಆ ಪಾಪಿ ಜೀವಂತವಾಗಿದ್ದನೆಂದರೆ ಇದೊಂದು ದುರಂತವಲ್ಲದೆ ಬೇರೇನು? ಥೂ!!!!!

ಅಮೇರಿಕಾ ಶತ್ರುವಿನ ದೇಶಕ್ಕೆ ನುಗ್ಗಿ ಅವನನ್ನು ಸದೆ ಬಡಿಯಿತು ಆದರೆ ನಾವು ಶತ್ರುವನ್ನು ಸೆರೆ ಹಿಡಿದೂ ಅವನನ್ನು ಶಿಕ್ಷಿಸದೆ ಜತನದಿಂದ ಕಾಪಾಡುತ್ತೇವೆ ಅಂದ್ರೆ ಏನು? ಛೆ!! ಎಂತಹ ವೀರ, ಶೂರರು ಆಳಿದ ನಮ್ಮ ನಾಡಿಗೆ ಈ ಗತಿ ಬಂತಲ್ಲ? ಅಯ್ಯೋ! ದೇವರೇ ನಮಗೆ ನೀನೆ ಗತಿ!!

1 comment:

  1. Naga,

    Howdu ivattina stithi nodi tumba besara vaaguttade. nammma deshavannu nammanta yuva peeligeye badalaayisabeku.

    ReplyDelete