Saturday, July 30, 2011

ಲೋಕದ ಡೊಂಕ ನೀವೇಕೆ ತಿದ್ದುವಿರಿ

ಸ್ನೇಹಿತರೇ,

ಇವತ್ತು ತಾನೆ ವಿಶ್ವದ ಹಿರಿಯಣ್ಣ ಅಂತ ಅನ್ನಿಸಿಕೊಳ್ಳೋದಿಕ್ಕೇ ಯಾವಾಗಲೂ ಪ್ರಯತ್ನ ಪಡ್ತಾನೆ ಇರೋ ಅಮೆರಿಕದಿಂದ ಒಂದು ಹೇಳಿಕೆ ಹೊರಬಿದ್ದಿದೆ. ಹೇಳಿಕೆ ಕೊಟ್ಟವರು ಇಡೀ ವಿಶ್ವವೇ ಹೆಮ್ಮೆ ಪಟ್ಟಿದ್ದ ಒಬಾಮ!!! ಆಗಿದ್ದು ಇಷ್ಟೇ, ತೈಲ ಬೆಲೆ ಏರಿಕೆಗೆ ಈಗ ಮುಂದುವರೆಯುತ್ತಿರುವ ಚೀನಾ ಹಾಗೂ ಭಾರತ ಕಾರಣವಂತೆ. ಹಿಂದೊಮ್ಮೆ ಯಾರೋ ಇನ್ನೊಬ್ಬ ಮಹಾಶಯ ಜಗತ್ತಿನಲ್ಲಿ ಹೆಚ್ಚುತ್ತಿರುವ ಆಹಾರ ಸಮಸ್ಯೆಗೆ ಈ ಎರಡು ದೇಶಗಳೇ ಕಾರಣ ಎಂದಿದ್ದ. ಈ ಹೇಳಿಕೆಯೂ ಅದರ ಇನ್ನೊಂದು ಮುಖ ಅಷ್ಟೇ. ಅಲ್ಲಾ ಆ ಅಮೆರಿಕದವರೂ ಮನೆಗೆ ಮೂರು ಮೂರು ಕಾರುಗಳನ್ನು ಇಟ್ಟುಕೊಂಡಿರುತ್ತಾರೆ. ಅವರಿಗೆ ಹೆಚ್ಚು ಇಂದನ ಕಬಳಿಸುವ ಎಸ್.ಯು.ವಿ. (ಸ್ಪೋರ್ಟ್ ಯುಟಿಲಿಟಿ ವೆಹಿಕೆಲ್) ಗಳೇ ಬೇಕು. ನಮ್ಮ ಜನ ಎಲ್ಲಿ ಪೆಟ್ರೋಲ್ ಖರ್ಚಾಗಿ ಹೋಗುತ್ತೋ ಅಂತ ಯೋಚಿಸಿ ಮಾಡಿ, ಅಳೆದು ಸುರಿದು ಕೊನೆಗೆ ಬೇರೆ ದಾರಿ ಇಲ್ಲವೆಂದು ತೋರಿದಾಗ ಉಪಯೋಗಿಸುತ್ತಾರೆ. ಮಿತವ್ಯಯದ ಮಂತ್ರ ವನ್ನು ಜಗತ್ತಿಗೆ ಹೇಳಿಕೊಟ್ಟವರೆ ನಾವು. ನಮ್ಮ ಜನ ಅಲ್ಪ ಸ್ವಲ್ಪ ಮಿತವ್ಯಯ ಮಾಡದೆ ಇದ್ದಿದ್ದರೆ, ಮೊನ್ನೆ ಆರ್ಥಿಕ ಹಿಂಜರಿತ ಉಂಟಾದಾಗ ಅಮೆರಿಕ ನಡುಗಿ ಹೋಯ್ತು. ಅದರ ರಾಕ್ಷಸ ದಂತಹ ದೊಡ್ಡ ದೊಡ್ಡ ಸಂಸ್ಥೆ ಗಳೇ ನಲುಗಿ ಹೋದವು. ನಮ್ಮಲ್ಲಿ ಆ ಥರ ಏನೂ ಆಗಲಿಲ್ಲ.

ಈ ಅಮೇರಿಕದವರದ್ದು ಅತಿ ಆಯಿತು. ಬರಿ ಸ್ವಾರ್ಥಿಗಳು. ಬೇರೆಯವರಿಗೆ ಹೇಳುವ ಮೊದಲು ತಮ್ಮದನ್ನು ನೋಡಿಕೊಳ್ಳಲಿ. ಇಂತವರನ್ನು ನೋಡಿಯೇ ನಮ್ಮ ಬಸವಣ್ಣ ೧೨ನೆ ಶತಮಾನದಲ್ಲೇ ಹೇಳಿದರು.
ಲೋಕದ ಡೊಂಕ ನೀವೇಕೆ ತಿದ್ದುವಿರಿ
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ

ಸರಿಯಾಗಿ ಹೇಳಿದರಲ್ಲವಾ?

No comments:

Post a Comment